Hare Srinivasa!!
Today we did chintana of second line of Shri Madhwacharyaru's Vandevandyam shloka and then Devaranama "Dayavirali Dayavirali Damodara !" written by Sri Gopala Dasaru. Please find the lyrics of the song below with the Audio link for the same [Rendition by Sri.Vidhyabhushana[only 3 stanzas]]
Audio Link:
http://kannadaaudio.com/Songs/Devotional/home/Jagodaddarana.php
Skype Discussion Link:
https://drive.google.com/file/d/0BywRqmWEm2eHaTJJQWtzTHhwdHc/view?usp=sharing
Lyrics:
ಕೀರ್ತನಕಾರರು : ಗೋಪಾಲದಾಸರು
ದಯವಿರಲಿ ದಯವಿರಲಿ ದಾಮೋದರ ।।ಪ॥
ಸಯವಾಗಿ ಬಿಡದೆನ್ನ ಸಾಕುವ ಶ್ರೀಕ್ರಷ್ಣ ।।ಅ.ಪ॥
ಹೋಗಿ ಬರುವೆನಯ್ಯ ಹೋದ ಹಾಂಗೆಲ್ಲ
ಸಾಗುವವನಲ್ಲನಾ ನಿನ್ನ ಬಿಟ್ಟು
ತೂಗಿ ತೊಟ್ಟಿಲು ಕೊನೆಗೆ ಸ್ಥಳದಲ್ಲೆ ನಿಲ್ಲುವುದು
ಹ್ಯಾಗೆ ನೀ ನಡೆದಂತೆ ಹಾಗೆ ನಾ ನಡಕೊಂಬೆ ।।೧।।
ಇದ್ದಲ್ಲೆ ಎನ್ನನುದ್ಧರಿಪ ಶಕ್ತಿ ಅ-
ಸಾಧ್ಯ ನಿನಗೆಂದು ನಾ ಬಂದವನಲ್ಲ
ನದ್ಯಾದಿ ಕ್ಷೇತ್ರಮೂರ್ತಿಗಳಲ್ಲ್ಲಿ ನಿಜ ಜ್ಞಾನ
ವೃದ್ಧ ಜನರ ಹುಡುಕಿ ನಿನ್ನ ತಿಳಿಯಲು ಬಂದೆ ।।೨।।
ಸತತ ಇದ್ದಲ್ಲೆ ಎನ್ನ ಸಲಹೊ ಅವರೊಳಗಾಗಿ
ಅತಿಶಯವು ಉಂಟು ವಿಭೂತಿಯಲ್ಲಿ
ಗತಿಯು ಸಾಧನಕೆ ಅಭಿವ್ಯಕ್ತ ಸಂದರ್ಶನದಿ
ಸ್ಮೃತಿಗೆ ವಿಶೇಷ ಮಾರುತಿರಮಣ ನಿನ್ನ ।।೩।।
ನೋಡಿದೆನೆ ನಾ ನಿನ್ನ ನೋಡದೆ ಎಂದೆಂದು
ಪಾಡಿದೆನೆ ಆರಾರು ಪಾಡದೊಂದು
ಮಾಡಿದೆನೆ ಅರ್ಚನೆಯ ಮೀಸಲಾದುದು ಒಂದು
ಮೂಢಮತಿಯಲಿ ಮುಂದೆ ನಿಂದೆ ಕೈಮುಗಿದು ।।೪।।
ಬಂದೆನೊ ನಾನಿಲ್ಲಿ ಬಹುಜನ್ಮದ ಸುಕೃತ-
ದಿಂದ ನಿನ್ನ ಬಳಿಗೆ ಇಂದಿರೇಶ
ಒಂದು ಮಾತ್ರವು ಇಟ್ಟು ಸಕಲವು ಅರ್ಪಿಸಿದೆ
ಬಂಧನ ಬಡಿವ ಭಕುತಿಯು ಜ್ಞಾನ ನೀಡುವುದು ।।೫।।
ಬಿನ್ನಪವ ಕೇಳು ಸ್ವಾಮಿ ಎನ್ನನೋಬ್ಬನ್ನೆ ಅಲ್ಲ
ಎನ್ನ ಹೊಂದಿ ನಡೆವ ವೈಷ್ಣವರನ
ಇನ್ನವರಿಗೆ ಬಾಹೊ ದುಷ್ಕರ್ಮಗಳ ಕೆಡಿಸಿ
ಘನಗತಿಗೈದಿಸುವ ಭಕುತಿ ಕೊಡು ಕರುನಾಡಿ ।।೬।।
ರಾಜರಾಜೇಶ್ವರ ರಾಜೀವದಳನಯನ
ಮೂಜಗದೊಡೆಯ ಮುಕುಂದಾನಂದ
ಈ ಜೀವಕೀ ದೇಹ ಬಂದದ್ದಕ್ಕು ಎನಗತಿ ನಿ
ರ್ವ್ಯಾಜದಿ ಸುರಗಂಗೆ ಸ್ನಾನವನು ಮಾಡಿಸೊ ।।೭।।
ಎನಗೆ ಆವುದು ಒಲ್ಲೆ ಎಲ್ಲೆಲ್ಲಿ ಪೋದರು
ಕ್ಷಣ ಬಿಡದೆ ನಿನ್ನ ನೋಳ್ಪ ಜ್ಞಾನವ ಕೊಡೊ
ಚಿನುಮಯ ಮೂರುತಿ ಗೋಪಾಲವಿಠಲ
ಘನಕರುಣಿ ಮಧ್ವಮುನಿ ಮನಮಂದಿರನಿವಾಸ ।।೮।।
Lyrics link:
http://daasabhajane.blogspot.in/2013/08/dayavirali-dayavirali-damodara.html
No comments:
Post a Comment